ವಾರದಲ್ಲಿ ನಾಲೆಗಳಿಗೆ ನೀರು ಬಿಡದಿದ್ದರೇ ಬೆಂಗಳೂರು ಚಲೋ: ಕುಮಾರಸ್ವಾಮಿ ಎಚ್ಚರಿಕೆ

ಒಂದು ವಾರದೊಳಗೆ ಜಿಲ್ಲೆಯ ನಾಲೆಗಳಿಗೆ ನೀರು ಹರಿಸದಿದ್ದರೇ ಜುಲೈ 31 ರಂದು ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಮಾಜಿ ಸಿಎಂ ಹಾಗೂ ...
ಕುಮಾರಸ್ವಾಮಿ
ಕುಮಾರಸ್ವಾಮಿ
ಮೈಸೂರು: ಒಂದು ವಾರದೊಳಗೆ ಜಿಲ್ಲೆಯ  ನಾಲೆಗಳಿಗೆ ನೀರು ಹರಿಸದಿದ್ದರೇ ಜುಲೈ 31 ರಂದು ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ  ಮಾಜಿ ಸಿಎಂ ಹಾಗೂ ಜೆಡಿಎಸಿ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರ ಸ್ವಾಮಿ ಎಚ್ಚರಿಸಿದ್ದಾರೆ.
ಮೈಸೂರು ಸಮೀಪದ ಕೆ.ಆರ್ ನಗರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿದ ಕುಮಾರ ಸ್ವಾಮಿ, ಸರ್ಕಾರಕ್ಕೆ ರಾಜ್ಯದ ರೈತರ ಹಿತಕ್ಕಿಂತ ತಮಿಳುನಾಡಿನ ರೈತರ ಹಿತವೇ ಮುಖ್ಯವಾಗಿದೆ ಎಂದು ಆರೋಪಿಸಿದ್ದಾರೆ.
ಕೃಷಿ ಚಟುವಟಿಕೆಗಳಿಗಾಗಿ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಲು ಪಾದಯಾತ್ರೆ ನಡೆಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. 
ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕಾವೇರಿ ಕಣಿವೆ ಪ್ರದೇಶದ ರೈತರಿಗೆ ಬಿಡದೇ ತಮಿಳುನಾಡಿಗೆ ಬಿಡಲಾಗುತ್ತಿದೆ, ರಾಜ್ ಸರ್ಕಾರಕ್ಕೆ ರೈತರ ಸಮಸ್ಯೆಗಳ ಬಗ್ಗೆ ಕಾಳಜಿಯಿಲ್ಲ ಎಂದು ಟೀಕಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com