ರಾವ್ ಅವರ ನೀಡಿರುವ ನೋಟಿಸ್'ನ್ನು ನೋಡಿದ್ದೇನೆ. ನಾನು ನನ್ನ ಕರ್ತವ್ಯವನ್ನಷ್ಟೇ ನಿರ್ವಹಿಸಿದ್ದೇನೆ. ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿಯೂ ಪ್ರಕರಣ ದಾಖಲಾಗಿದೆ. ಅದರ ಕಡೆಗೂ ಅವರು ಗಮನ ಕೊಡಬೇಕಿದೆ. ಚುನಾವಣಾ ಆಯೋಗ ಭ್ರಷ್ಟಾಚಾರ ಪ್ರಕರಣ ಸಂಬಂಧ ಆಸ್ಟ್ರೇಲಿಯಾ ಪ್ರಕಾಶ್ ಅವರು ದೆಹಲಿ ಪೊಲೀಸರ ಬಳಿ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾರೆ. ಆಸ್ಟ್ರೇಲಿಯಾ ಪ್ರಕಾಶಅ ಅವರಿಗೆ ಜೈಲಿನ ಅಧಿಕಾರಿಗಳ ಬಗ್ಗೆ ಚೆನ್ನಾಗಿ ತಿಳಿದಿದೆ. ನಾನು ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಇದು ಬೆಳಕು ಚೆಲ್ಲಿದೆ. ತನಿಖೆ ಸಂದರ್ಭದಲ್ಲಿ ಎಸಿಬಿ ಇದನ್ನೂ ಕೂಡ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.