ಈ ಕುರಿತು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ್ದ ಒಕ್ಕೂಟದ ಅಧ್ಯಕ್ಷ ಎ.ಸಿ.ಕುಮಾರಸ್ವಾಮಿ, ನಾಳೆ ಬೆಳಗ್ಗೆ 10 ಗಂಟೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದು, ಐಟಿ ಕಂಪೆನಿಗಳು ನೌಕರರನ್ನು ವಜಾಗೊಳಿಸುವುದನ್ನು ವಿರೋಧಿಸಿ ಮತ್ತು ಉದ್ಯೋಗ ಭದ್ರತೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಲಿದ್ದೇವೆ ಎಂದು ಹೇಳಿದರು.