ನೂತನವಾಗಿ ನೇಮಕಗೊಂಡಿರುವ ಪ್ರಾಂಶುಪಾಲೆ ಕಿರುಕುಳ ನೀಡುತ್ತಿದ್ದಾರೆಂದು ಶಿಕ್ಷಕರು ಆರೋಪ ಮಾಡಿದ್ದರು. ಅಲ್ಲದೆ, ಕಳೆದೆರಡು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಶಾಲಾ ಮಕ್ಕಳೂ ಕೂಡ ಶಿಕ್ಷಕರೊಂದಿಗೆ ಸೇರಿಕೊಂಡು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ರಾಜೀನಾಮೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.