ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಕುರಿದಂತೆ ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಕನ್ನಡ ನಾಡು, ನುಡಿ ವಿಚಾರಗಳು ಭಾವನಾತ್ಮಕ ವಿಚಾರಗಳಾಗಿವೆ. ಕನ್ನಡಿಗರ ಭಾವನೆಗಳಿಗೆ ಗೌರವ ನೀಡಲು ಕೂಡಲೇ ಮೆಟ್ರೋ ನಾಮಫಲಕಗಳಿಂದ ಹಿಂದಿ ತೆಗೆಸಿ, ಕನ್ನಡ ಮತ್ತು ಇಂಗ್ಲಿಷ್ ಭಾಷೆ ಮಾತ್ರ ಇರುವಂತೆ ಮಾಡಬೇಕೆಂದು ಆಗ್ರಹಿಸಿದ್ದಾರೆ.