ನವಲಗುಂದ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮಹದಾಯಿ ನದಿ ನೀರು ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರು ಮತ್ತು ನಿವೃತ್ತ ಶಿಕ್ಷಕ ಡಿ.ವಿ.ಕುರಹಟ್ಟಿ ಅವರ ನೇತೃತ್ವದಲ್ಲಿ ನವಲಗುಂದದಲ್ಲಿ ರೈತರು ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.