4 ಲಕ್ಷ ರುಪಾಯಿ ನೀಡುವ ಸ್ಥಿತಿಯಲ್ಲಿರದ ಕುಟಂಬ ಅಂತಿಮವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ಬೆನ್ನತ್ತಿದ ಪೊಲೀಸರು, ಅಪಹರಣಾಕಾರರು ಬಸನಾಳ ಬಳಿ ಇದ್ದಾರೆ ಎಂಬ ಖಚಿತ ಮಾಹಿತಿಯನ್ನಾಧರಿಸಿ, ದಾಳಿ ನಡೆಸಿದ್ದಾರೆ. ಈ ವೇಳೆ ಅಪಹರಣಾಕಾರರೂ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಆತ್ಮ ರಕ್ಷಣೆಗಾಗಿ ಪೊಲೀಸರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಆರೋಪಿಗಳ ಕಾಲಿಗೆ ಗುಂಡು ತಗುಲಿದೆದ್ದೂ, ಮೂವರು ಪೊಲೀಸ್ ಸಿಬ್ಬಂದಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.