ತುಮಕೂರು: ಬನಶಂಕರಿ ಬೇಕರಿಗೆ ನುಗ್ಗಿದ ಖಾಸಗಿ ಬಸ್, ಇಬ್ಬರು ಸಾವು

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಬ್ರೇಕ್ ಫೇಲ್ ಆಗಿ ಬೇಕರಿಯೊಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ತುಮಕೂರು: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಬ್ರೇಕ್ ಫೇಲ್ ಆಗಿ ಬೇಕರಿಯೊಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಕೊರಟಗೆರೆ ತಾಲೂಕಿನ ಕೋಳಾಲದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕೋಳಾಲ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬನಶಂಕರಿ ಬೇಕರಿಯೊಳಕ್ಕೆ ನುಗ್ಗಿದೆ.
ಘಟನೆಯಲ್ಲಿ ಖಾಸಗಿ ಬಸ್ ನೊಳಗಿದ್ದ ಲಕ್ಷ್ಮಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೇಕರಿ ಮಾಲೀಕ ಕುಮಾರ್(35ವರ್ಷ) ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com