ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ನಟ ಉಪೇಂದ್ರ ಅವರು 2005ರಲ್ಲಿ ತಾವರೆಕೆರೆಯ ಬ್ಯಾಲಾಳುವಿನಲ್ಲಿ 17 ಎಕರೆ 10 ಗುಂಟೆ ಜಮೀನು ಖರೀದಿಸಿದ್ದರು.
ವ್ಯವಸಾಯದ ಜಮೀನು ಖರೀದಿಸಿದ್ದರಿಂದ ಉಪೇಂದ್ರ ಅವರು ಭೂಕಂದಾಯ ಕಾಯ್ದೆ 79ಎ, ಬಿ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಉಪವಿಭಾಗಾಧಿಕಾರಿ ಅವರು ಜಮೀನನ್ನು ವಶಪಡಿಸಿಕೊಂಡಿದ್ದರು.
ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದಾಗ ಉಪವಿಭಾಗಾಧಿಕಾರಿ ಆದೇಶವನ್ನು ಕೋರ್ಟ್ ರದ್ಧುಪಡಿಸಿತ್ತು. ಬಳಿಕ ರಾಜ್ಯ ಸರ್ಕಾರ ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.