ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮೆಗ್ಗಾನ್ ಆಸ್ಪತ್ರೆಯ ನಿರ್ದೇಶಕ ಸುಶೀಲ್ ಕುಮಾರ್ ಅವರು, ಆಸ್ಪತ್ರೆಯ ಸಿಬ್ಬಂದಿಯ ಗಮನಕ್ಕೆ ತರದೆ ಫಾಮಿದಾ ಅವರು ತಮ್ಮ ಪತಿ ಅಮೀರ್ ಸಾಬ್ ನನ್ನು ಎಳೆದುಕೊಂಡು ಹೋಗಿದ್ದಾರೆ. ಆದಾಗ್ಯೂ ನಾವು ನಿರ್ಲಕ್ಷ್ಯ ವಹಿಸಿದ ಇಬ್ಬರು ನರ್ಸ್ ಗಳಾದ ಜ್ಯೋತಿ, ಚಿತ್ರಾ ಹಾಗೂ ಗ್ರೂಪ್ ಡಿ ಸುವರ್ಣಮ್ಮನನ್ನು ಅಮಾನತುಗೊಳಿಸಿದ್ದೇವೆ ಎಂದು ಹೇಳಿದ್ದಾರೆ.