ಶಿವಮೊಗ್ಗ: ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದೆ ಗಂಡನನ್ನು ನೆಲದ ಮೇಲೆಯೇ ಎಳೆದೊಯ್ದ ಪತ್ನಿ!

ಶಿವಮೊಗ್ದದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದೆ ಅನಾರೋಗ್ಯ ಪೀಡಿತ ಪತಿಯನ್ನು ನೆಲದ ಮೇಲೆ ಎಳೆದೊಯ್ದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ...
ಪತಿಯನ್ನು ಎಳೆದೊಯ್ಯುತ್ತಿರುವ ದೃಶ್ಯ
ಪತಿಯನ್ನು ಎಳೆದೊಯ್ಯುತ್ತಿರುವ ದೃಶ್ಯ
Updated on
ಶಿವಮೊಗ್ಗ: ಶಿವಮೊಗ್ದದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದೆ ಅನಾರೋಗ್ಯ ಪೀಡಿತ ಪತಿಯನ್ನು ನೆಲದ ಮೇಲೆ ಎಳೆದೊಯ್ದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಮೀರ್ ಸಾಬ್ ಎಂಬುವರನ್ನು 9 ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಮೀರ್ ಎಕ್ಸ್ ರೇ ನಡೆಸಲು ವೈದ್ಯರು ಬರೆದಿದ್ದರು. ಅಂತೆ ಅಮೀರ್ ಪತ್ನಿ ಫಾಮಿದಾ ಅವರು ಎಕ್ಸ್ ರೇ ಮಾಡಿಸುವಲ್ಲಿ ಸಾಗಿಸಲು ಆಸ್ಪತ್ರೆ ಸಿಬ್ಬಂದಿಗಳ ನೆರವು ಕೇಳಿದಾಗ ಯಾರೊಬ್ಬರು ನೆರವು ನೀಡಲಿಲ್ಲ ಇದರಿಂದಾಗಿ ಅವರು ಪತಿಯನ್ನು ನೆಲದ ಮೇಲೆ ದರದರನೆ ಎಳೆದೊಯ್ದಿದ್ದಾರೆ. ಈ ದೃಶ್ಯವನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. 
ಆಸ್ಪತ್ರೆಯ ಸಿಬ್ಬಂದಿಗಳು ಯಾವುದೇ ಕೆಲಸಕ್ಕೆ ಆಗಲಿ ದುಡ್ಡನ್ನು ಕೇಳುತ್ತಾರೆ. ಹಣ ಕೊಡದೆ ಇದ್ದಾಗ ಅವರು ನಮ್ಮ ನೆರವಿಗೆ ಬರುವುದಿಲ್ಲ ಎಂದು ಪತ್ನಿ ಫಾಮಿದಾ ಹೇಳಿದ್ದಾರೆ. 
ಈ ವಿಡಿಯೋ ಇದೀಗ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ವತಿಯಿಂದ ಈ ಬಗ್ಗೆ ತನಿಖೆ ನಡೆಸುವುದಾಗಿ ಹೇಳಲಾಗಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com