ಮಂಗಳೂರು: ಕರಾವಳಿ ರಕ್ಷಣಾ ಪಡೆಯಿಂದ ಏಳು ಮೀನುಗಾರರ ರಕ್ಷಣೆ

ಸಮುದ್ರ ಮಧ್ಯೆ ಪ್ರವಾಹಕ್ಕೆ ಸಿಲುಕಿ ಮುಳುಗುತ್ತಿದ್ದ ದೋಣಿಯಲ್ಲಿದ್ದ ಏಳು ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ...
ಮುಳುಗುತ್ತಿರುವ ದೋಣಿ
ಮುಳುಗುತ್ತಿರುವ ದೋಣಿ
Updated on
ಮಂಗಳೂರು: ಸಮುದ್ರ ಮಧ್ಯೆ ಪ್ರವಾಹಕ್ಕೆ ಸಿಲುಕಿ ಮುಳುಗುತ್ತಿದ್ದ ದೋಣಿಯಲ್ಲಿದ್ದ ಏಳು ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ಬುಧವಾರ ರಕ್ಷಿಸಿದೆ.
ಮಂಜೇಶ್ವರಿ ಎಂಬ ಗಿಲ್ ನೆಟ್ ದೋಣಿ ಇಂದು ಬೆಳಗ್ಗೆ ಮಲ್ಫೆ ಬಂದರಿಗೆ ತೆರಳುತ್ತಿದ್ದ ವೇಳೆ ಮೂರು ಕಿ.ಮೀ. ಕ್ರಮಿಸಿದ ನಂತರ ತಣ್ಣೀರು ಬಾವಿ ಸಮೀಪ ತೀವ್ರ ಅಲೆಗಳ ಪರಿಣಾಮ ಪ್ರವಾಕ್ಕೆ ಸಿಲುಕಿತ್ತು. ಅಪಾಯದ ಮುನ್ಸೂಚನೆಯನ್ನು ಅರಿತ ಮೀನುಗಾರರು ಅಲರಾಂ ನೀಡಿದ ಹಿನ್ನೆಲೆಯಲ್ಲಿ ಕರಾವಳಿ ರಕ್ಷಣಾ ಪಡೆ ತಂಡ ತಕ್ಷಣ ನೆರವಿಗೆ ಧಾವಿಸಿ ಮೀನುಗಾರರಿಗೆ ರಕ್ಷಣೆ ಒದಗಿಸಿದೆ. 
ಸಮುದ್ರದಲ್ಲಿ ಮೀನುಗಾರರು ಅಪಾಯದಲ್ಲಿರುವ ಬಗ್ಗೆ ಮಾಹಿತಿ ದೊರೆತ ತಕ್ಷಣ ಕರಾವಳಿ ಪಡೆಯ ರಾಜದೂತ್ ನೌಕೆ ಸ್ಥಳಕ್ಕೆ ತೆರಳಿ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿ ಎನ್ಎಂ ಪಿಟಿ ಬಂದರಿಗೆ ತಲುಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com