ನಗರದಲ್ಲಿ ನಿನ್ನೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅನುರಾಗ್ ತಿವಾರಿ ತಂದೆ ಬಿ.ಎನ್. ತಿವಾರಿ ಮತ್ತು ತಾಯಿ ಸುಶೀಲಾ ಅವರು, ಪುತ್ರನ ನಿಗೂಢ ಸಾವು ಕುರಿತಂತೆ ಹಲವು ಶಂಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದು, ನ್ಯಾಯ ಕೊಡಿಸುವಂತೆ ಆಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ.