ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಬಿಬಿ ಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಶಾಂತಕುಮಾರ್ ನ ಮೃತದೇಹವನ್ನು ಮೊದಲು ತೋರಿಸಿ ನಂತರ ಪರಿಹಾರ ಕೇಳಿ ಎಂದ ಅಧಿಕಾರಿಗಳ ಹೆಸರು ಹೇಳಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ವ್ಯಕ್ತಿಯ ಮೃತದೇಹ ಸಿಗದಿದ್ದರೆ ಕಾನೂನು ಪ್ರಕಾರ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲು ಏಳು ವರ್ಷ ಬೇಕಾಗುತ್ತದೆ. ಆದರೆ ಮಾನವೀಯ ದೃಷ್ಟಿಯಿಂದ ಆದಷ್ಟು ಶೀಘ್ರವೇ ಸರಸ್ವತಿಗೆ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.