ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಗುಡ್ಡವನ್ನು ಕಡಿಯಲಾಗಿತ್ತು. ಇನ್ನು ಕುಮಟಾದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡು ಮೀನುಗಾರರ ಮನೆಯ ಮೇಲೆ ಕುಸಿದಿದೆ. ಪರಿಣಾಮ ಅವಶೇಷಗಳಡಿ ಸಿಲುಕಿ ಮಕ್ಕಳಾದ ಭವ್ಯಾ ಅಂಬಿಗ(13), ಯತೀನ್(7) ಮತ್ತು ಧನುಷ್ ದಾರುಣ ಸಾವನ್ನಪ್ಪಿದ್ದಾರೆ. ಇನ್ನು ಮನೆಯಲ್ಲಿದ್ದ ಮಹಿಳೆಯರು ಸೇರಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.