ಸಿದ್ದರಾಮಯ್ಯ ಸರ್ಕಾರ ಕೋ- ಆಪರೇಟಿವ್ ಬ್ಯಾಂಕ್ ಗಳ ಸಾಲಮನ್ನಾ ಮಾಡಲು ಬದ್ಧವಾಗಿದೆ. ಆದರೆ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಲಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ಸಹಕಾರ ಬ್ಯಾಂಕುಗಳ ರೈತರ ಸಾಲ ಮನ್ನಾ ಮಾಡಿದರೆ, ರಾಷ್ಟ್ರೀಕೃತ ಬ್ಯಾಂಕುಗಳ ರೈತರ ಸಾಲ ಉಳಿಯುತ್ತದೆ. ಇದರಿಂದ ಅಸಮಾನತೆ ಸೃಷ್ಟಿಯಾಗುತ್ತದೆ. ಹಾಗಾಗಿ, ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವೂ ಅಗತ್ಯವಿದೆ ಎಂದು ಹೇಳಿದ್ದಾರೆ.