ಉಪಲೋಕಾಯುಕ್ತರ ವರದಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ದೊರೆತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. 2016-17 ನೇ ಸಾಲಿನಲ್ಲಿ ತುಮಕೂರಿಗೆ ಜಾನುವಾರುಗಳ ಮೇವು ಹಾಗೂ ಆಶ್ರಯಕ್ಕಾಗಿ 22 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಅನುದಾನದ ಸಂಪೂರ್ಣ ಮೊತ್ತ ದುರುಪಯೋಗವಾಗಿದ್ದು, ಮೇವು ಸರಿಯಾಗಿ ಪೂರೈಕೆಯಾಗಿಲ್ಲ, ಜಾನುವಾರುಗಳ ಆಶ್ರಯಕ್ಕಾಗಿ ನಿರ್ಮಿಸಲಾಗಿದ್ದ ಕಟ್ಟಡಗಳು ಕಳಪೆ ಗುಣಮಟ್ಟ ಹೊಂದಿವೆ, ನಕಲಿ ಬಿಲ್ ಗಳನ್ನು ಪಾವತಿಸಿ ಹಣ ದೋಚಲಾಗಿದೆ ಎಂದು ತಿಳಿದುಬಂದಿದೆ. ಹಗರಣಕ್ಕೆ ಸಂಬಂಧಿಸಿದಂತೆ 126 ಅಧಿಕಾರಿಗಳಿಗೆ ಲೋಕಾಯುಕ್ತ ನೊಟೀಸ್ ಜಾರಿ ಮಾಡಿದ್ದು, 22 ಕೋಟಿ ರೂಪಾಯಿ ದುರ್ಬಳಕೆ ಮಾಡಿರುವುದರ ಬಗ್ಗೆ ವಿವರಣೆ ಕೇಳಿದ್ದಾರೆ.