ಮಂಜುನಾಥ್ ಬಸವೇಶ್ವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಮುಗಿಸಿದ್ದರು. ಬಳಿಕ ಮಾಸ್ಟರ್ ಸಾಫ್ಟ್ ವೇರ್ ಉನ್ನತ ವ್ಯಾಸಂಗಕ್ಕಾಗಿ 2 ವರ್ಷಗಳ ಹಿಂದೆ ಜರ್ಮನಿಯ ಹ್ಯಾಂಬರ್ಗ್ ಗೆ ತೆರಳಿದ್ದರು. ಇದೇ ಸೆಪ್ಚೆಂಬರ್ ನಲ್ಲಿ ಊರಿಗೆ ಬರುವುದಾಗಿ ಮಂಜುನಾಥ್ ತಿಳಿಸಿದ್ದರು. ಆದರೆ ಇದೀಗ ಮಂಜುನಾಥ್ ನಾಪತ್ತೆಯಾಗಿದ್ದು, ಈ ಸಂಬಂಧ ಮಂಜುನಾಥ್ ಜೊತೆ ವಾಸಿಸುತ್ತಿದ್ದ ಆತನ ಸ್ನೇಹಿತ ಅನಿಲ್ ದೇಶಪಾಂಡೆ ಅವರು ಹ್ಯಾಂಬರ್ಗ್ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಮಂಜುನಾಥ್ ನಾಪತ್ತೆ ಕುರಿತು ಬಾಗಲಕೋಟೆಯಲ್ಲಿರುವ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.