ಬಾಗಲಕೋಟೆ: ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಸಹೋದರ ಸಂಬಂಧಿ ವೀರೇಶ್ ಕಾಶಪ್ಪನವರು ಸೇರಿದಂತೆ ನಾಲ್ವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಸಂಬಂಧ ಮಹಾಂತೇಶ್ ಕಾಶಪ್ಪನವರ್ ಪರಾರಿಯಾಗಿದ್ದಾರೆ.
ಹುನಗುಂದ ತಾಲೂಕಿನ ಜಾಲ ಕಮಲದಿನ್ನಿ ಹಳ್ಳದಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಶಾಸಕನ ಸಹೋದರ ಸಂಬಂಧಿ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ನಾಲ್ವರನ್ನು ಹುನಗುಂದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.