ಬೆಳಗಾವಿ ಪಾಲಿಕೆ
ಬೆಳಗಾವಿ ಪಾಲಿಕೆ

ಬೆಳಗಾವಿ ಪಾಲಿಕೆಯಲ್ಲಿ ಮೊಳಗಿದ ನಾಡಗೀತೆ; ಎದ್ದುನಿಂತು ಗೌರವ ತೋರಿದ ಎಂಇಎಸ್!

ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಮೊಟ್ಟ ಮೊದಲ ಬಾರಿಗೆ ನಾಡಗೀತೆ ಮೊಳಗಿದ್ದು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಂಬಲಿತ ಸದಸ್ಯರು...
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಮೊಟ್ಟ ಮೊದಲ ಬಾರಿಗೆ ನಾಡಗೀತೆ ಮೊಳಗಿದ್ದು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಂಬಲಿತ ಸದಸ್ಯರು ಯಾವುದೇ ತಕರಾರು ಮಾಡದೇ ಎದ್ದು ನಿಂತು ಗೌರವ ಸಲ್ಲಿಸಿದರು. 
ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆಯು ಇಂದಿಗೆ ನಿಗದಿಯಾಗಿತ್ತು. ಚುನಾವಣೆ ಪ್ರಕ್ರಿಯೆ ಆರಂಭಗೊಳ್ಳುವ ಮೊದಲು ಪ್ರಾದೇಶಿಕ ಆಯುಕ್ತ ಎನ್ ಜಯರಾಮ್ ಮಾತನಾಡಿ ಸರ್ಕಾರದ ಯಾವುದೇ ಕಾರ್ಯಕ್ರಮ ಪ್ರಾರಂಭಿಸುವಾಗ ನಾಡಗೀತೆ ಹಾಗೂ ಮುಕ್ತಾಯದ ವೇಳೆ ರಾಷ್ಟ್ರಗೀತೆ ನುಡಿಬೇಕು. ಈಗ ನಾಡಗೀತೆ ನುಡಿಸಲಾಗುವುದು ಎಲ್ಲರೂ ಎದ್ದುನಿಂತು ಗೌರವ ಸಲ್ಲಿಸಬೇಕು ಎಂದು ಸೂಚಿಸಿದರು.
ನಾಡಗೀತೆ ಆರಂಭಗೊಳ್ಳುತ್ತಿದ್ದಂತೆ ಎಂಇಎಸ್ ಬೆಂಬಲಿತ ಮೇಯರ್ ಸಂಜೋತಾ ಬಾಂದೇಕರ್, ಶಾಸಕ ಸಂಭಾಜಿ ಪಾಟೀಲ ಸೇರಿದಂತೆ ಇತರ ಎಲ್ಲ ಸದಸ್ಯರು ಹಾಗೂ ಅಧಿಕಾರಿಗಳು ಎದ್ದುನಿಂತು ಗೌರವ ನೀಡಿದರು. 

Related Stories

No stories found.

Advertisement

X
Kannada Prabha
www.kannadaprabha.com