ಸಾಮಾಜಿಕ ಆರ್ಥಿಕ ಸುಧಾರಣೆಗಳಲ್ಲಿ ಸಾಧನೆ ಮಾಡಿದ ದೇಶದ ವಿವಿಧ ಭಾಗಗಳ 30 ಜನರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನಿಂದ ಪತ್ರಕರ್ತೆ, ನಿರೂಪಕಿ ಸ್ವಾತಿ ಚಂದ್ರಶೇಖರ್, ದಾವಣಗೆರೆಯಿಂದ ಗಂಗಾಧರಯ್ಯ ಹಿರೇಮಠ್, ರೋಣದಿಂದ ಮಹದೇವಪ್ಪ ಹಿರಿಜನ್, ಗುಂಟೂರಿನಿಂದ ಸರಸ್ವತಿ ರಾಜು ಅಯ್ಯರ್ ಸೇರಿದಂತೆ ಒಟ್ಟು 30 ಜನರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ ಮೈಕಾನ್ ನಿರ್ಮಾಣ ಸಂಸ್ಥೆಯಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಖರೀದಿ ವಿಭಾಗದ ವ್ಯವಸ್ಥಾಪಕ ಪುಟ್ಟ ನಾಯ್ಕ್ ಅವರಿಗೂ ಸನ್ಮಾನ ಮಾಡಲಾಯಿತು.