ಈ ಬಗ್ಗೆ ತಿಳಿಯುತ್ತಿದ್ದಂತೆಯೇ ಮೈಸೂರಿನ ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಕಲಾಮಂದಿರ ಸರ್ಕಾರಿ ಸಭಾಂಗಣವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಇರುವ ಸ್ಥಳ, ಅಲ್ಲಿ ಮಾಂಸಾಹಾರ ಸೇವನೆಯಾಗಬಾರದು. ಈ ಘಟನೆಯನ್ನು ನೋಡಿದಾಗ ಕಲಾಮಂದಿರ ನಾನ್ ವೆಜ್ ಹೋಟೆಲ್ ಆಗಿ ಪರಿವರ್ತನೆಯಾಗಿದೆಯೇ ಎಂದೆನಿಸುತ್ತಿದೆ. ಕಲಾಮಂದಿರದಲ್ಲಿ ಬೀಫ್ ಸೇವನೆ ಒಪ್ಪುವುದಕ್ಕೆ ಸಾಧ್ಯವಿಲ್ಲ. ಜಿಲ್ಲಾಡಳಿತ ಈ ಬಗೆಗ್ ಕ್ರಮ ಕೈಗೊಳ್ಳಬೇಕೆಂದು ಕನ್ನಡ ವೇದಿಕೆ ಕಾರ್ಯಕರ್ತ ಬಾಲಕೃಷ್ಣ ಆಗ್ರಹಿಸಿದ್ದಾರೆ.