ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ಕೆ.ಜೆ.ಜಾರ್ಜ್, ಐಟಿ ಸಿಟಿಯ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಹೂಡಿಕೆ ಮಾಡಿದ್ದಕ್ಕಿಂತ ಕೇಂದ್ರದ ಹಣ ಸಹಾಯ ಕಡಿಮೆಯಾಗಿದೆ. ಕರ್ನಾಟಕ ಸರ್ಕಾರ 7,500 ಕೋಟಿ ರೂಪಾಯಿ ವ್ಯಯ ಮಾಡುತ್ತಿದೆ. ಕಳೆದೆರಡು ವರ್ಷಗಳಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಸುಮಾರು 2,000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆದರೆ ಸ್ಮಾರ್ಟ್ ಸಿಟಿಗಾಗಿ ಕೇಂದ್ರದ ಆರ್ಥಿಕ ನೆರವು ಸಾಕಾಗುವುದಿಲ್ಲ ಎಂದು ಹೇಳಿದರು.