ಬೆಂಗಳೂರು: ಹೆದ್ದಾರಿಗಳಲ್ಲಿರುವ ಮದ್ಯದ ಅಂಗಡಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಇದೀಗ ಕೇಂದ್ರದ ಕದ ತಟ್ಟಿದೆ. ಹೆದ್ದಾರಿಗಳಲ್ಲಿರುವ ಬಾರ್ ಗಳು ಸೇರಿದಂತೆ ಬೆಂಗಳೂರಿನ ಎಂ.ಜಿ.ರಸ್ತೆ, ಇಂದಿರಾನಗರ, ಚರ್ಚ್ ಸ್ಟ್ರೀಟ್ ರಸ್ತೆಗಳಲ್ಲಿರುವ ಮದ್ಯದಂಗಡಿಗಳನ್ನು ಮುಚ್ಚುವಂತೆ ಸುಪ್ರೀಂ ಕೋರ್ಟ್ ಆದೇಶ ಪ್ರಕಾರ ನೊಟೀಸ್ ನೀಡಲಾಗಿತ್ತು.