ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಎಸ್ ಎಸ್ಸಿ, ಎಸ್ ಟಿ ಜನಾಂಗದ 23 ಅಸಿಸ್ಟೆಂಟ್ ಎಂಜಿನೀಯರ್ ಗಳಿಗೆ ಸರ್ಕಾರ ನೀಡಿರುವ ಮೀಸಲಾತಿ ಆಧಾರದ ಬಡ್ತಿಗೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ಮಂಡಳಿ ವಿರೋಧ ವ್ಯಕ್ತ ಪಡಿಸಿದೆ, ಜೊತೆಗೆ ಸರ್ಕಾರ ಸಿದ್ದ ಪಡಿಸಿರುವ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಹೇಳಿದೆ. ಹಾಗೂ ಎರಡು ತಿಂಗಳಲ್ಲಿ ಹೊಸದಾಗಿ ಪಟ್ಟಿ ಸಿದ್ದಪಡಿಸಬೇಕು ಎಂದು ಆದೇಶಿಸಿದೆ.