ಪೇಜಾವರ ಶ್ರೀಗಳಿಂದ ಹಿಂದೂ ಸಮಾಜಕ್ಕೆ ಅವಮಾನ: ಪ್ರಮೋದ್ ಮುತಾಲಿಕ್ ಆಕ್ರೋಶ

ಪೇಜಾವರ ಶ್ರೀಗಳು ಮಠದಲ್ಲಿ ನಮಾಜ್‌ ಮಾಡಲು ಅವಕಾಶ ನೀಡಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಶ್ರೀರಾಮ ...
ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
Updated on
ಹುಬ್ಬಳ್ಳಿ: ಶ್ರೀ ಕೃಷ್ಣ ಮಠ ಹಿಂದೂಗಳ ಪವಿತ್ರ ಕ್ಷೇತ್ರವಾಗಿದ್ದು ಅದರ ಪಾವಿತ್ರ್ಯತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಆದರೆ ಪೇಜಾವರ ಶ್ರೀಗಳು ಮಠದಲ್ಲಿ ನಮಾಜ್‌ ಮಾಡಲು ಅವಕಾಶ ನೀಡಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,  ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹಿಂದೂ ಸಮಾಜವನ್ನು ಅವಮಾನಿಸಿದ್ದಾರೆ. ಅವರ ಧೋರಣೆ ಖಂಡಿಸಿ ಜುಲೈ 2 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. 
ಇಫ್ತಾರ್‌ಕೂಟದ ಕುರಿತು ಸಮರ್ಥನೆ ವೇಳೆ ಹಿಂದೂಗಳೂ ಗೋಮಾಂಸ ಸೇವಿಸುತ್ತಾರೆ ಎಂದು ಶ್ರೀಗಳು ಹೇಳಿಕೆ ನೀಡಿದ್ದು ಆ ಹೇಳಿಕೆ ಹಿಂಪಡೆಯಬೇಕು ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com