ವೇಣುಗೋಪಾಲ್ ಅವರು ಕಾಂಗ್ರೆಸ್ ನಲ್ಲಿದ್ದು, ಕಮ್ಯುನಿಸ್ಟ್ ಸಿದ್ಧಾಂತಗಳ ಪ್ರಭಾವಕ್ಕೊಳಗಾಗಿದ್ದಾರೆ. ನಮ್ಮ ಕಾಲೇಜು ಕ್ಯಾಂಪಸ್ ಗಳಲ್ಲಿ ಅಂತಹ ಸಿದ್ಧಾಂತಗಳನ್ನು ಹೇರಲು ಸಾಧ್ಯವಿಲ್ಲ. ಸಂಘ ಪರಿವಾರಕ್ಕೆ ಬೆಂಬಲವಾಗಿರುವ ಪ್ರಾಂಶುಪಾಲರ ಬಗ್ಗೆ ಮಾಹಿತಿ ಬೇಕೆಂದಿದ್ದರೆ, ರಾಜ್ಯ ಎಬಿವಿಪಿ ಕಚೇರಿಗೆ ಬರಲಿ ನಾವೇ ಅವರಿಗೆ ಮಾಹಿತಿಯನ್ನು ನೀಡುತ್ತೇವೆ. ಅವರಿಗೆ ಬೆಂಬಲ ನೀಡುವ ವಿದ್ಯಾರ್ಥಿಗಳನ್ನು ಹಾಗೂ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲಿ. ಆದರೆ, ನಮ್ಮ ಸಂಘಟನೆಗೆ ಬೆಂಬಲ ನೀಡುವವರಿಗೆ ತೊಂದರೆ ಸುಮ್ಮನಿರುವುದಿಲ್ಲ ಎಂದಿದ್ದಾರೆ.