ಈ ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತ ಪಡಿಸುತ್ತಿದೆ. ವಾರ್ಷಿಕವಾಗಿ ತಮಿಳುನಾಡಿಗೆ 192 ಟಿಎಂಸಿ ಅಡಿ ನೀರು ಬಿಡಲಾಗುತ್ತದೆ. ಜೊತೆಗೆ ಮಳೆಗಾಲದ ಸಂದರ್ಭದಲ್ಲಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ಹಾಗಾಗಿ ಅಂತಹ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸಿ, ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಿಕೊಳ್ಳುವುದು ಯೋಜನೆ ಮುಖ್ಯ ಉದ್ದೇಶವಾಗಿದೆ.