ವಾಹನ ಚಾಲಕರ ವಿರುದ್ಧ ಸುಳ್ಳು ಕೇಸುಗಳನ್ನು ಸಂಚಾರಿ ಪೊಲೀಸರು ದಾಖಲಿಸುತ್ತಾರೆ ಎಂದು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸ್ ವಿಭಾಗ ಈ ಕ್ರಮ ಕೈಗೊಂಡಿದೆ. ಸಂಚಾರ ನಿಯಮವನ್ನು ಉಲ್ಲಂಘಿಸಿದವರು ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳದಿರುವುದನ್ನು ತಡೆಯಲು, ಅವರ ಬಗ್ಗೆ ದಾಖಲೆ ಸಲ್ಲಿಸಲು ಮತ್ತು ಸಂಚಾರಿ ಪೊಲೀಸರು ಲಂಚ ಪಡೆಯುತ್ತಾರೆ ಎಂಬ ಸವಾರರ ಆರೋಪಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.