2015ರಲ್ಲಿ ಶಿರಡಿ ಘಾಟ್ ರಸ್ತೆಯ ಕಾಮಗಾರಿಗೆ ವರ್ಕ್ ಆರ್ಡರ್ ಆಗಿತ್ತು. ಕೆಂಪ್ಹೊಳೆಯಿಂದ ಗುಂಡ್ಯಾ ಗೇಟ್ ವರೆಗೂ 30 ಕಿ.ಮೀ ರಸ್ತೆಗಳಲ್ಲಿ ಎರಡನೇ ಹಂತದಲ್ಲಿ ಕಾಂಕ್ರೀಟ್ ಹಾಕಬೇಕಾಗಿತ್ತು. ಶಿರಡಿ ಘಾಟ್ ರಸ್ತೆಯ 2ನೇ ಹಂತದ ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ರಸ್ತೆಗಳಿಗೆ ಕಾಂಕ್ರೀಟ್ ಹಾಕುವ ಕೆಲಸವೂ ಕೂಡ ಹಾಳಾಗಿದೆ ಎಂದು ಟೀ ವ್ಯಾಪಾರಿ ಗಿರೀಶ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.