ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನಗರಾಭಿವೃದ್ಧಿ) ಮಹೇಂದ್ರ ಜೈನ್ ಅವರು ಮಾತನಾಡಿ, ನಗರದಲ್ಲಿ ಮತ್ತೆರಡು ಉಕ್ಕಿನ ಸೇತುವೆ ನಿರ್ಮಾಣ ಕುರಿತು ಯೋಜನೆಗಳನ್ನು ರೂಪಿಸಲಾಗಿತ್ತು. ಸಂಪುಟ ಸಭೆ ಕರೆದು ಸಭೆ ಬಳಿಕ ರಾಜ್ಯ ಸರ್ಕಾರ ಈ ಕುರಿತ ನಿರ್ಧಾರಗಳನ್ನು ಕೈಗೊಳ್ಳಲಿದೆ. ವಿರೋಧ ಪಕ್ಷಗಳ ತೀವ್ರ ಟೀಕೆ, ಸಾರ್ವಜನಿಕರು ಹಾಗೂ ಎನ್ ಜಿಒ ಗಳ ವಿರೋಧಗಳು ರಾಜ್ಯ ಸರ್ಕಾರ ಈ ರೀತಿಯ ನಿರ್ಧಾರ ಕೈಗೊಳ್ಳಲು ಕಾರಣವಾದವು ಎಂದು ಹೇಳಿದ್ದಾರೆ.