ಬರಗಿ ಗ್ರಾಮದ ನಾಗೇಶ್ ಅಲಿಯಾಸ್ ಬೊಗಪ್ಪ (24) ಮೃತ ರೈತನಾಗಿದ್ದು, ಅರಣ್ಯ ಪ್ರದೇಶದ ಹತ್ತಿರದಲ್ಲೇ ಜಮೀನು ಹೊಂದಿದ್ದಾರೆ. ಇದು ಎರಡನೇ ಬಾರಿಗೆ ಕಾಡಾನೆ ದಾಳಿಯಿಂದ ಬೆಳೆ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 6 ತಿಂಗಳ ಹಿಂದೆ ಕಾಡಾನೆ ಹಿಂಡು ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿತ್ತು. ಈ ಬಾರಿಯೂ ಬಾಳೆಹಣ್ಣು ಬೆಳೆ ಕಾಡಾನೆ ದಾಳಿಗೆ ಸಂಪೂರ್ಣ ನಾಶವಾಗಿದೆ.