ವಿಚಾರಣೆ ವೇಳೆ ಆರೋಪಿಗಳ ಅರ್ಜಿಗೆ ಅಕ್ಷೇಪಣೆ ವ್ಯಕ್ತಪಡಿಸಿ ಕಮರ್ಷಿಯಲ್ ಸ್ಟ್ರೀಟ್ ಠಾಣಾ ಪೊಲೀಸರ ಪರ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರು, ಆರೋಪಿಗಳು ಒಂದು ಸಂಘಟನೆಯ ಸದಸ್ಯಕರಾಗಿದ್ದು, ಹತ್ಯೆಯೊಂದು ವ್ಯವಸ್ಥಿತ ಪಿತೂರಿಯಾಗಿದೆ. ಹತ್ಯೆಯಾದ ರುದ್ರೇಶ್ ಹಾಗೂ ಆರೋಪಿಗಳ ನಡುವೆ ಯಾವುದೇ ರೀತಿಯ ವೈಯಕ್ತಿಕ ದ್ವೇಷಗಳಿರಲಿಲ್ಲ. ವ್ಯವಸ್ಥಿತ ಪಿತೂರಿ ರುದ್ರೇಶ್ ರನ್ನು ಕೊಂದಿರುವ ಬಗ್ಗೆ ವಿಚಾರಣೆ ವೇಳೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ಮೊಬೈಲ್ ಕರೆಗಳ ದಾಖಲೆ ಪರಿಶೀಲಿಸಿದಾಗ, ಹೊರರಾಜ್ಯದಲ್ಲಿ ಪಿತೂರಿ ಸಂಚು ನಡೆದಿರುವುದು ಹಾಗೂ ನಿರ್ದಿಷ್ಟ ಸಮುದಾಯದ ವಿರುದ್ಧ ಭಯೋತ್ಪಾದನಾ ಕೃತ್ಯ ನಡೆಸಲು ಉದ್ದೇಶಿಲಾಗಿತ್ತು ಎಂಬುವುದೂ ಕೂಡ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.