ಬರಹಗಾರ ಯೋಗೇಶ್ ಮಾಸ್ಟರ್ ಮುಖಕ್ಕೆ ಮಸಿ ಬಳಿದ ಪ್ರಕರಣ; ಕೇಸು ದಾಖಲು

ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ...
ಯೋಗೇಶ್ ಮಾಸ್ಟರ್
ಯೋಗೇಶ್ ಮಾಸ್ಟರ್
Updated on
ದಾವಣಗೆರೆ: ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ ಬಳಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಿಸಲಾಗಿದೆ.
ಕನ್ನಡದ ವಿವಾದಾತ್ಮಕ ಕಾದಂಬರಿ 'ದುಂಡಿ'ಯ ಲೇಖಕರಾಗಿರುವ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ನಿನ್ನೆ ದಾವಣಗೆರೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಪ್ಪು ಬಣ್ಣದ ಶಾಯಿಯನ್ನು ಬಳಿದಿದ್ದರು. ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹೊರಗೆ ಚಹಾ ಸೇವಿಸಲು ಬಂದಿದ್ದ ವೇಳೆ ಯೋಗೇಶ್ ಅವರ ಮುಖಕ್ಕೆ ಶಾಯಿ ಬಳಿಯಲಾಗಿತ್ತು. 
ಕೆಲ ಬಲ ಪಂಥೀಯ ಸಂಘಟನೆಗಳು ಈ ಕೃತ್ಯದ ಹಿಂದೆ ಇರಬಹುದು ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com