ಬೆಂಗಳೂರು: ನೆಲಮಂಗಲ-ಶ್ರವಣಬೆಳಗೊಳ ರೈಲು ಮಾರ್ಗ ಪೂರ್ಣಗೊಂಡಿದ್ದರೂ ಉದ್ಘಾಟನೆಗೆ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ. ಮಾ.9 ಕ್ಕೆ ನವದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲು ರೈಲ್ವೆ ಸಚಿವ ಸುರೇಶ್ ಪ್ರಭು ಪ್ರಸ್ತಾವನೆ ನೀಡಿದ್ದರಾದರೂ, ಸಿಎಂ ಸಿದ್ದರಾಮಯ್ಯ ಬಜೆಟ್ ಕಾರಣ ನೀಡಿ ಉದ್ಘಾಟನೆಯ ದಿನಾಂಕದಂದು ಉಪಸ್ಥಿತಿ ಇರುವುದಕ್ಕೆ ಸಾಧ್ಯವಿಲ್ಲ ಎಂಬುದನ್ನು ಮನವಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲು ಮಾರ್ಗ ಉದ್ಘಾಟನೆ ದಿನಾಂಕ ಮುಂದೂಡಲ್ಪಟ್ಟಿದೆ.