ಆನೇಕಲ್: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಪುರಸಭೆ ಸದಸ್ಯನ ಬರ್ಬರ ಹತ್ಯೆ

ನಗರದ ಹೊರವಲಯದ ಹೊಸೂರು ಮುಖ್ಯ ರಸ್ತೆಯ ಬಿಟಿಎಲ್ ಕಾಲೇಜು ಬಳಿ ಪುರಸಭೆ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ
ವಾಸು
ವಾಸು
Updated on

ಬೆಂಗಳೂರು: ನಗರದ ಹೊರವಲಯದ ಹೊಸೂರು ಮುಖ್ಯ ರಸ್ತೆಯ ಬಿಟಿಎಲ್ ಕಾಲೇಜು ಬಳಿ ಪುರಸಭೆ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಆನೇಕಲ್ ತಾಲೂಕಿನ ಬೊಮ್ಮಸಂದ್ರ ಪುರಸಭೆಯ ಬಿಜೆಪಿ ಸದಸ್ಯ ಕಿತ್ತಗಾನಹಳ್ಳಿ ವಾಸು ಕೊಲೆಯಾದ  ವ್ಯಕ್ತಿ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಕಾರಿನಲ್ಲಿ ತೆರಳುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಕೊಲೆಯಾದ ವಾಸು ಆನೇಕಲ್ ತಾಲೂಕಿನ ಬಿಜೆಪಿ ಮುಖಂಡರಾಗಿದ್ದು, ಇವರ ಪತ್ನಿ ಜಿಲ್ಲಾ ಪಂಚಾಯ್ತಿ ಸದಸ್ಯೆಯಾಗಿದ್ದಾರೆ. ಈ ಸಂಬಂಧ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com