ಕೇಂದ್ರ ರೈತರ ಸಾಲ ಮನ್ನಾ ಮಾಡದೇ ಇರುವುದರ ಬಗ್ಗೆ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಸಿದ್ದರಾಮಯ್ಯನವರ ಹೇಳಿಕೆ ಮೂರ್ಖತನದ ಪರಮಾವಧಿಯದ್ದಾಗಿದೆ. ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಸಿದ್ದರಾಮಯ್ಯನವರು ಮೊದಲು ತಮ್ಮ ಸರ್ಕಾರದ ಬೊಕ್ಕಸದಿಂದ ಸಾಲ ಮನ್ನಾ ಮಾಡಲಿ, ನಾವು ಅಧಿಕಾರದಲ್ಲಿರಬೇಕಾದರೆ ಅಂದಿನ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡದೇ 2 ಬಾರಿ ಸಾಲ ಮನ್ನಾ ಮಾಡಿದ್ದೆವು. ಆದ್ದರಿಂದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದತ್ತ ಕೈತೋರಿಸದೇ ಸಾಲ ಮನ್ನಾ ಮಾಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.