ಬೆಂಗಳೂರು: ಪೊಲೀಸ್ ಇಲಾಖೆಗೆ ನೀಡಿದ ಹಲವು ಸೌಕರ್ಯಗಳಿಂದಾಗಿ ರಾಜ್ಯ ಬಜೆಟ್ ಹೆಚ್ಚಿನ ಸದ್ದು ಮಾಡಿದೆ.
ರಾಜ್ಯದ ಎಲ್ಲಾ ಠಾಣೆಗಳಲ್ಲಿ ಮಹಿಳಾ ಸಿಬ್ಬಂದಿಗಾಗಿ ಪ್ರತ್ಯೇಕ ಶೌಚಾಲಯ ಸ್ಥಾಪನೆಗೆ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಮಹಿಳಾ ಪೊಲೀಸರ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಈಗ ಸ್ಪಂದಿಸಿದೆ. ಸಿದ್ದರಾಮಯ್ಯ ಅವರ ಸರ್ಕಾರದ ಈ ಕಾರ್ಯದಿಂದ ನನಗೆ ಅತೀವ ಸಂತೋಷವಾಗಿದೆ ಎಂದು ಮಾಜಿ ಡಿಜಿಪಿ ಗರುಡಾಚಾರ್ ಹೇಳಿದ್ದಾರೆ.
ಹಲವು ವರ್ಷಗಳಿಂದ ಸರ್ಕಾರ ಇಂಥಹ ಸೂಕ್ಷ್ಮ ವಿಷಯದ ಬಗ್ಗೆ ಗಮನ ಹರಿಸಿರಲಿಲ್ಲ. ಪೊಲೀಸ್ ಇಲಾಖೆ ಆಧುನೀಕರಣಕ್ಕೆ ಸಿದ್ದರಾಮಯ್ಯ ಗಮನ ಹವಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹೊಸ ವಿಧಿ ವಿಜ್ಞಾನ ಪ್ರಯೋಗಾಲಯ ಕೇಂದ್ರ ಸ್ಥಾಪನೆಗೆ ಸರ್ಕಾರ 20 ಕೋಟಿ ರು ಅನುದಾನ ಘೋಷಿಸಿರುವುದನ್ನು ಅವರು ಶ್ಲಾಘಿಸಿದ್ದಾರೆ.
Advertisement