ಬಸ್ಸಿನಲ್ಲಿ 35 ಪ್ರಯಾಣಿಕರು ಇದ್ದರು, ಲಕ್ಕನಹಳ್ಳಿ ಬಿಟ್ಟ ಸ್ವಲ್ಪ ಸಮಯದಲ್ಲಿಯೇ ನಾಗರಾಜು ಎದೆ ಮೇಲೆ ಕೈ ಇಟ್ಟುಕೊಂಡು ನೋವಿನಿಂದ ಬಳಲುತ್ತಲೇ ತಕ್ಷಣ ಬಸ್ ನ ಬ್ರೇಕ್ ಒತ್ತಿದ್ದಾರೆ. ಈ ವೇಳೆ ಒಂದು ಹಂತದಲ್ಲಿ ಬಸ್ ರಸ್ತೆ ಬದಿಗೆ ಹೋಗಿದೆ. ಅಷ್ಟರಲ್ಲಾಗಲೇ ನಾಗರಾಜು ಮೃತಪಟ್ಟಿದ್ದಾರೆ. ಆಗ ಪಕ್ಕದಲ್ಲೇ ಕುಳಿತಿದ್ದ ಬಸ್ ಏಜೆಂಟ್ ಮಾರುತಿ ಎಂಬುವವರು ಬಸ್ ಅನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.