ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ನಗರದ ಮಹಾರಾಣಿ ಮಹಿಳಾ ಕಾಲೇಜ್ ಪ್ರಾಧ್ಯಾಪಕ ಬೆಗೂರು ರಾಮಲಿಂಗಪ್ಪ ಅವರನ್ನು ಕಾಲೇಜ್ ಶಿಕ್ಷಣ ಇಲಾಖೆ ಸೋಮವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಆಂತರಿಕ ದೂರುಗಳ ಸಮಿತಿ ನೀಡಿದ ತನಿಖಾ ವರದಿಯನ್ನು ಆಧರಿಸಿ ರಾಮಲಿಂಗಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಕಾಲೇಜ್ ಶಿಕ್ಷಣ ಇಲಾಖೆ ಆಯುಕ್ತ ಅಜಯ್ ನಾಗಭೂಷಣ್ ಅವರು ತಿಳಿಸಿದ್ದಾರೆ.
ಕಾಲೇಜ್ ಆವರಣದಲ್ಲಿ ನಡೆದ ಕಾಲೇಜ್ ಉತ್ಸವದ ನಂತರ ರಾಮಲಿಂಗಪ್ಪ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದರು.
ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಪಸ್ ನಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಮಹಾರಾಣಿ ಕಾಲೇಜ್ ನ ಮತ್ತೊಬ್ಬ ಪ್ರಾಧ್ಯಾಕರನ್ನು ಸಹ ಅಮಾನತುಗೊಳಿಸಲಾಗಿದೆ.