ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೃಷ್ಣ ಅವರು ಹಲವು ಅಕ್ರಮಗಳನ್ನು ಭಾಗಿಯಾಗಿದ್ದಾರೆ. ಅಳಿಯ ಸಿದ್ಧರ್ಥ್ ಅವರು ಅಕ್ರಮ ಆಸ್ತಿ ಗಳಿಸಲು ಸಹಾಯ ಮಾಡಿದ್ದಾರೆ. ಪ್ರಧಾನಿ ಮೋದಿಯವರು ಭ್ರಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ಹೋರಾಟ ನಡೆಸುತ್ತಿದ್ದು, ಹೀಗಾಗಿ ಕೃಷ್ಣ ಅವರನ್ನು ಬಿಜೆಪಿ ತನ್ನ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.