ತುಮಕೂರು: ಯುಗಾದಿಗೆ ಹೊಸ ಬಟ್ಟೆ ಕೊಡಿಸಿಲ್ಲವೆಂದು ನೊಂದ ಬಾಲಕಿಯರಿಂದ ಆತ್ಮಹತ್ಯೆ ಯತ್ನ

ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲು ಸಾಕು ತಂದೆತಾಯಿಗಳು ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಸಹೋದರಿಯರಿಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ತುಮಕೂರು: ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲು ಸಾಕು ತಂದೆತಾಯಿಗಳು ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಸಹೋದರಿಯರಿಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ  ಶಿರಾ ಪಟ್ಟಣದ ಕೊಟ್ಟಾದ ರಂಗಾಪುರದಲ್ಲಿ ನಡೆದಿದೆ.

4 ನೇ ತರಗತಿ ವಿದ್ಯಾರ್ಥಿನಿ ರಾಧಾ(11) ಮತ್ತು 9ನೇ ತರಗತಿ ವಿದ್ಯಾರ್ಥಿನಿ ನೀಲಾ ಆತ್ಮಹತ್ಯೆಗೆ ಯತ್ನಿಸಿದ ಸಹೋದರಿಯರು, ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಾಲಕಿಯರ ಪೋಷಕರು ಒಂದು ವರ್ಷದ ಹಿಂದೆ ಸಾವನ್ನಪ್ಪಿದ್ದರು. ಹೀಗಾಗಿ ಇಬ್ಬರು ಸಹೋದರಿಯರನ್ನು ಅವರ ಚಿಕ್ಕಪ್ಪ ಹೆಂಜಿರಪ್ಪ ಎಂಬುವರು ದತ್ತು ತೆಗೆದುಕೊಂಡು ಸಾಕುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com