ತುಮಕೂರು: ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲು ಸಾಕು ತಂದೆತಾಯಿಗಳು ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಸಹೋದರಿಯರಿಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಶಿರಾ ಪಟ್ಟಣದ ಕೊಟ್ಟಾದ ರಂಗಾಪುರದಲ್ಲಿ ನಡೆದಿದೆ.
4 ನೇ ತರಗತಿ ವಿದ್ಯಾರ್ಥಿನಿ ರಾಧಾ(11) ಮತ್ತು 9ನೇ ತರಗತಿ ವಿದ್ಯಾರ್ಥಿನಿ ನೀಲಾ ಆತ್ಮಹತ್ಯೆಗೆ ಯತ್ನಿಸಿದ ಸಹೋದರಿಯರು, ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಾಲಕಿಯರ ಪೋಷಕರು ಒಂದು ವರ್ಷದ ಹಿಂದೆ ಸಾವನ್ನಪ್ಪಿದ್ದರು. ಹೀಗಾಗಿ ಇಬ್ಬರು ಸಹೋದರಿಯರನ್ನು ಅವರ ಚಿಕ್ಕಪ್ಪ ಹೆಂಜಿರಪ್ಪ ಎಂಬುವರು ದತ್ತು ತೆಗೆದುಕೊಂಡು ಸಾಕುತ್ತಿದ್ದಾರೆ.
Advertisement