ಇದರ ನಡುವೆ ಕೌಲ್ ಬಜಾಲ್ ನಲ್ಲಿರುವ ಕಾಂಗ್ರೆಸ್ ಕಾರ್ಪೊರೇಟರ್ ದಿವ್ಯಾಕುಮಾರ್ ಅವರ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಬೆದರಿಕೆ ಹಾಕಿ ಮನೆ ಮುಂದೆ ನಿಲ್ಲಿಸಿದ್ದ 2 ಬೈಕ್ ಗಳಿಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಘಟನಾ ಸಂದರ್ಭದಲ್ಲಿ ದಿವ್ಯಾಕುಮಾರಿಯವರು ಮನೆಯಲ್ಲಿ ಇರಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ದಿವ್ಯಾ ಅವರ ಜಾತಿಯನ್ನು ಹಿಡಿದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು ಎಂದು ತಿಳಿದುಬಂದಿದೆ.