1954ರಲ್ಲಿ ಅಮ್ಮು ಶೆಟ್ಟಿ-ಕಮಲಾ ಶೆಡ್ತಿ ದಂಪತಿ ಪುತ್ರನಾಗಿ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ಜನಿಸಿದ ಗಂಗಯ್ಯ ಅವರು, ಧರ್ಮಸ್ಥಳ ಯಕ್ಷಗಾನ ಕೇಂದ್ರದಲ್ಲಿ ಪಡ್ರೆ ಚಂದು ಅವರಲ್ಲಿ ಯಕ್ಷಗಾನದ ನಾಟ್ಯವನ್ನು ಕಲಿತಿದ್ದರು. 1970ರಲ್ಲಿ ತಮ್ಮ 16ನೇ ವಯಸ್ಸಿನಲ್ಲಿ ಯಕ್ಷರಂಗ ಪ್ರವೇಶಿಸಿದ್ದರು. ಕಟೀಲು ಮೇಳದಲ್ಲೂ ವೃತ್ತಿ ಜೀವನ ಪ್ರಾರಂಭಿಸಿದ್ದರು. ಸುಮಾರು 47 ವರ್ಷಗಳ ಕಾಲ ಕಟೀಲು ಮೇಳವೊಂದರಲ್ಲೇ ಕಲಾವಿದರಾಗಿದ್ದ ಗಂಗಯ್ಯ ಅವರು, ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರದಲ್ಲಿ ಆಪಾರ ಹೆಸರನ್ನು ಗಳಿಸಿದ್ದರು.