ನಗರದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಕುರಿತು ಜೆಡಿಎಸ್'ನ ಟಿ.ಎ. ಶರವಣ, ಕಾಂಗ್ರೆಸ್'ನ ಎಂ ನಾರಾಯಣ ಸ್ವಾಮಿ ಹಾಗೂ ಬಿಜೆಪಿಯ ಲೆಹರ್ ಸಿಂಗ್ ಸಿರೋಯ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ಮಾದಕ ವಸ್ತು ಕಳ್ಳಸಾಗಣೆ ಕುರಿತಂತೆ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದೆ. ಪ್ರಮುಖವಾಗಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಬೆಂಗಳೂರು ಪಂಜಾಬ್ ಹಾದಿ ಹಿಡಿಯಲು ನಾವು ಬಿಡುವುದಿಲ್ಲ. ರಾಜ್ಯ 'ಉಡ್ತಾ ಪಂಜಾಬ್' ಆಗುವುದಿಲ್ಲ ಎಂದು ಹೇಳಿದ್ದಾರೆ.