ಬೆಂಗಳೂರು: 2008ರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ವಾಗತಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆಯೇ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷರೂ ಕೂಡ ಆಗಿರುವ ಕುಮಾರಸ್ವಾಮಿ ಅವರು, ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ ಮತ್ತು ಎಸ್ ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಸಂಬಂಧ ಕರ್ನಾಟಕ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗಡೆ ವರದಿ ಕುರಿತಂತೆ ವಿಶೇಷ ತನಿಖಾ ದಳ ಮೂರು ತಿಂಗಳಲ್ಲಿ ತನ್ನ ತನಿಖಾ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿತ್ತು.
Advertisement