ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಸಚಿವರ ಹಸ್ತಕ್ಷೇಪ ಇದ್ದು, ಇದು ಸುಪ್ರೀಂ ಕೋರ್ಟ್ ಅದೇಶ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನಂತೆ ರಾಜ್ಯದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಅದರ ಪ್ರಕಾರ ‘ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಬೋರ್ಡ್’ ಮೂಲಕ ವರ್ಗಾವಣೆ ಮಾಡಬೇಕು. ಅದರೆ, ಸಿಎಂ ಸೇರಿ ಸಚಿವರು ತಮ್ಮ ಮಿನಿಟ್ ನೀಡಿ ಬೇಕಾದವರ ವರ್ಗಾವಣೆ ಮಾಡಿದ್ದಾರೆ ಮತ್ತು ಇದರಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಶಶಿಧರ್ ದೂರಿದ್ದಾರೆ.