ಮೂಡಿಗೆರೆ ಬಳಿ ಖಾಸಗಿ ಬಸ್‌ ಪಲ್ಟಿ, ಮೂವರು ಸಾವು, 11 ಮಂದಿಗೆ ಗಾಯ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೆಖಾನ್‌ ಬಳಿ ಶುಕ್ರವಾರ ಖಾಸಗಿ ಬಸ್‌ ಪಲ್ಟಿಯಾಗಿ ಮೂವರು ಪ್ರಯಾಣಿಕರು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೆಖಾನ್‌ ಬಳಿ ಶುಕ್ರವಾರ ಖಾಸಗಿ ಬಸ್‌ ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಇಂದು ಮಧ್ಯಾಹ್ನ ರಸ್ತೆ ತಿರುವಿನಲ್ಲಿ ಬಸ್‌‌ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಸ್ಥಳಕ್ಕೆ ಕಳಸ ಪೊಲೀಸರು ಗಮಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com