ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಇದೇ ಜಿಲ್ಲೆಯವರಾಗಿದ್ದು, ಬೇಸಿಗೆಗೆ ಸಾಕಾಗುವಷ್ಟು ನೀರು ಇದೆ ಎಂದು ಹೇಳುತ್ತಿದ್ದಾರೆ. ಆದರೆ ವಾಸ್ತವಾಂಶ ಬೇರೆಯದ್ದೇ ಇದ್ದು, 700 ವಿದ್ಯಾರ್ಥಿನಿಯರು ಹಾಗು ಬೋಧಕ ವರ್ಗ ಇರುವ ವಿಶ್ವವಿದ್ಯಾನಿಲಯ ಕ್ಯಾಂಪಸ್ ಗೆ ನೀರು ಪೂರೈಕೆಯಾಗುತ್ತಿಲ್ಲ. ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಎಂದು ವಿವಿ ಅಧಿಕಾರಿಯೊಬ್ಬರು ಹೇಳಿದ್ದಾರೆ.